28.6 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು.

ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಾಣಿಗಳಿಗೆ ಆಹಾರದ ಕೊರತೆಯಾದರೆ ಪ್ರಾಣಿಸಂಕುಲ ಅಳಿವಿನಂಚಿಗೆ ಸಾಗುತ್ತದೆ. ಭೂಮಿಗೆ ನಮ್ಮ ಅಗತ್ಯವಿಲ್ಲ ಆದರೆ ನಮಗೆ ಭೂಮಿಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಹಿತ ಪರಿಸರ, ಸುಂದರ ಪರಿಸರ ನಮ್ಮಿಂದಲೇ ನಿರ್ಮಾಣವಾಗಲಿ’ ಎಂದರು.

ಪರಿಸರ ಸೌಂದರ್ಯ ಉಳಿಸಲು ಹಾಗೂ ಜೀವಿಗಳ ಉಳಿಯುವಿಕೆಗೆ ಹಣ್ಣಿನ ಗಿಡಗಳನ್ನು ಬೆಳೆಯುವುದು ಮಹತ್ವದ ಕಾರ್ಯ ಎಂದು ಅವರು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಕಸಿಕಟ್ಟುವ ವಿಧಾನವನ್ನು ತಿಳಿಸಿಕೊಟ್ಟರು.

ವಿಶ್ವ ಪರಿಸರ ದಿನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ, ಪರಿಸರ ಹಾಡು, ನಾಟಕ, ನೃತ್ಯ, ಪ್ಲಾಸ್ಟಿಕ್ ಬದಲಿ ವಸ್ತುಗಳ ತಯಾರಿ-ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೌಫೀರ ಅತಿಥಿ ಪರಿಚಯ ನೀಡಿದರು. ಸೃಜನಾ ಸ್ವಾಗತಿಸಿ, ಮನಸ್ವಿ ವಂದಿಸಿದರು. ಜ್ಞಾನ್ ಅನ್ವೇಷ್, ಸಚಿತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya
error: Content is protected !!