24.7 C
ಪುತ್ತೂರು, ಬೆಳ್ತಂಗಡಿ
August 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು.

ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಾಣಿಗಳಿಗೆ ಆಹಾರದ ಕೊರತೆಯಾದರೆ ಪ್ರಾಣಿಸಂಕುಲ ಅಳಿವಿನಂಚಿಗೆ ಸಾಗುತ್ತದೆ. ಭೂಮಿಗೆ ನಮ್ಮ ಅಗತ್ಯವಿಲ್ಲ ಆದರೆ ನಮಗೆ ಭೂಮಿಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಹಿತ ಪರಿಸರ, ಸುಂದರ ಪರಿಸರ ನಮ್ಮಿಂದಲೇ ನಿರ್ಮಾಣವಾಗಲಿ’ ಎಂದರು.

ಪರಿಸರ ಸೌಂದರ್ಯ ಉಳಿಸಲು ಹಾಗೂ ಜೀವಿಗಳ ಉಳಿಯುವಿಕೆಗೆ ಹಣ್ಣಿನ ಗಿಡಗಳನ್ನು ಬೆಳೆಯುವುದು ಮಹತ್ವದ ಕಾರ್ಯ ಎಂದು ಅವರು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಕಸಿಕಟ್ಟುವ ವಿಧಾನವನ್ನು ತಿಳಿಸಿಕೊಟ್ಟರು.

ವಿಶ್ವ ಪರಿಸರ ದಿನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ, ಪರಿಸರ ಹಾಡು, ನಾಟಕ, ನೃತ್ಯ, ಪ್ಲಾಸ್ಟಿಕ್ ಬದಲಿ ವಸ್ತುಗಳ ತಯಾರಿ-ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೌಫೀರ ಅತಿಥಿ ಪರಿಚಯ ನೀಡಿದರು. ಸೃಜನಾ ಸ್ವಾಗತಿಸಿ, ಮನಸ್ವಿ ವಂದಿಸಿದರು. ಜ್ಞಾನ್ ಅನ್ವೇಷ್, ಸಚಿತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya
error: Content is protected !!