27 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya
error: Content is protected !!