27 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!