28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು.

ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೆ ನಂದ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾ.ಪಂ. ಸದಸ್ಯ ಹರೀಶ್ ಸುವರ್ಣ, ಶ್ರೀಮತಿ ಪವಿತ್ರ ಸುಕುಮಾರ್ ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ್ ಗೌಡ ಬೊಳ್ಮಾ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದು, ಎಲ್‌ಕೆಜಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ನೀಲಕಂಠ ಶೆಟ್ಟಿ ಮತ್ತು ಶೀನ, ಗೌರವ ಸಲಹೆಗಾರರಾದ ಸಿ.ಜಿ. ಪ್ರಭಾಕರ್ ಮತ್ತು ಅರುಣ್ ಕುಮಾರ್, ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹಶಿಕ್ಷಕಿಯರಾದ ಶ್ರೀಮತಿ ರಾಜಿ ಸಿ.ಕೆ ವಂದಿಸಿ, ಶ್ರೀಮತಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!