May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು.

ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೆ ನಂದ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾ.ಪಂ. ಸದಸ್ಯ ಹರೀಶ್ ಸುವರ್ಣ, ಶ್ರೀಮತಿ ಪವಿತ್ರ ಸುಕುಮಾರ್ ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ್ ಗೌಡ ಬೊಳ್ಮಾ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದು, ಎಲ್‌ಕೆಜಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ನೀಲಕಂಠ ಶೆಟ್ಟಿ ಮತ್ತು ಶೀನ, ಗೌರವ ಸಲಹೆಗಾರರಾದ ಸಿ.ಜಿ. ಪ್ರಭಾಕರ್ ಮತ್ತು ಅರುಣ್ ಕುಮಾರ್, ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹಶಿಕ್ಷಕಿಯರಾದ ಶ್ರೀಮತಿ ರಾಜಿ ಸಿ.ಕೆ ವಂದಿಸಿ, ಶ್ರೀಮತಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya
error: Content is protected !!