28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಯೋಗೀಶ್ ಕುಮಾರ್ ಕೈರೋಡಿ ಮಾತನಾಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಘಟನೆ ಮಾಡುತ್ತಿರುವ ಕೆಲಸ ಶ್ಲಾಘನೀಯ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪಾಲಿಸಿಕೊಂಡು ಬಂದಿರುವ ಸಂಘಟನೆ ನಿಜಕ್ಕೂ ಸಮಾಜಕ್ಕೆ ಮಾದರಿ ಮಕ್ಕಳು ಸೇವಾ ಮನೋಭಾವನೆಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಕೀರ್ತಿವಂತರಾಗಿ ಬಾಳಿ ಎಂದು ಕರೆ ನೀಡಿದರು.

ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕೆ. ಅನಿತಾ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ನವೀನ್ ಜೆ ಬುಳೆಕ್ಕರ ಅಧ್ಯಕ್ಷತೆ ವಹಿಸಿ ಸಂಘದ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಧಾರ್ಮಿಕ ಮುಖಂಡ ಜನಾರ್ದನ ಪೂಜಾರಿ ಕಡ್ತಿಲ ಉಪಸ್ಥಿತರಿದ್ದರು.

ಕುಕ್ಕೇಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜನಾರ್ಧನ ಪೂಜಾರಿ ಹಾಗೂ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕೆರಿಯರ್ ಹಾಗೂ ಪ್ರಮುಖರಾದ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು. ಸಂಘಟನೆಯ ಪದಾಧಿಕಾರಿಗಳು ಸಹಕರಿಸಿದರು.

ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ರತ್ನಾಕರ್ ಸಾಲ್ಯಾನ್ ಅಂಕರ್ಜಾಲು ಪ್ರಾಸ್ತಾವಿಸಿ, ಸ್ವಾಗತಿಸಿದರು. ಕು. ಅಮೂಲ್ಯ, ಅನನ್ಯ ಪ್ರಾರ್ಥಿಸಿದರು. ರವಿ ಉಲ್ತೂರು ನಿರೂಪಿಸಿದರು. ಸಂಘದ ಗೌರವಾಧ್ಯಕ್ಷ ಅಮ್ಮಾಜಿ ಕೆ. ಪೂಜಾರಿ ಧನ್ಯವಾದವಿತ್ತರು.

Related posts

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya
error: Content is protected !!