25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಬಳಂಜ: ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಜೂ.೮ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ.

ಸ್ವಾವಲಂಬಿ ಬದುಕು ಹಾಗೂ ಶೈಕ್ಷಣಿಕವಾಗಿ ಗಟ್ಟಿಕೊಂಡಾಗ ಬದುಕು ಸುಂದರವಾಗುತ್ತದೆ ಎಂಬ ಸದುದ್ದೇಶವನ್ನು ಇಟ್ಟುಕೊಂಡು, ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವ ಸಿದ್ದಾಂತ ವಿದ್ಯೆಯಿಂದ ಸ್ವತಂತ್ರರಾಗಿರಿ,ಸಂಘಟನೆಯಿಂದ ಬಲಯುತರಾಗಿರಿ ಎಂಬ ಮಾತಿನಂತೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಸುಮಾರು ನಾಲ್ಕೂವರೆ ದಶಕಗಳಿಂದ ಸಂಘದ ಧತ್ತಿನಿಧಿಯಿಂದ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತ ಬರುತ್ತಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya
error: Content is protected !!