24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
error: Content is protected !!