25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!