28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಕಾರಿಂಜ ಅಣ್ಣಪ್ಪ ಮೂಲ್ಯರವರ ಪುತ್ರಿ,ಬಂಟ್ವಾಳ ಜಕ್ರಿಬೆಟ್ಟು ನಮೋ ನಿವಾಸ ಪ್ರೇಮನಾಥ್ ಕುಲಾಲ್ ಇವರ ಪತ್ನಿ ಸುಮಿತ್ರಾ (38ವ) ಅನಾರೋಗ್ಯದಿಂದ ಬಳಲಿ ಜೂ.4 ರಂದು ನಿಧನರಾದರು.

ಕಳೆದ ಒಂದೂವರೆ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಿತ್ರಾ ಅವರಿಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ವಿದ್ಯಾರ್ಥಿ ಜೀವನದಲ್ಲೇ ಪ್ರತಿಭಾವಂತೆಯಾಗಿದ್ದ ಸುಮಿತ್ರಾ ಎಂ.ಎಸ್.ಡಬ್ಲ್ಯೂ ಪದವೀಧರೆ. ಸಾಧು ಸ್ವಭಾವದ ವ್ಯಕ್ತಿತ್ವದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಪ್ರೇಮನಾಥ್ ಕುಲಾಲ್, ಸಣ್ಣ ಮಗು ಯಾನ್ಸ್, ಸಹೋದರ ಸಹೋದರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು, ಬಂದು ಬಳಗವನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
error: Content is protected !!