32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!