May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!