24 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya
error: Content is protected !!