27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.

ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ಈ ಬಗ್ಗೆ ಸ್ವತಃ ದಿನೇಶ್‌ರವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
error: Content is protected !!