24.4 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.

ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ಈ ಬಗ್ಗೆ ಸ್ವತಃ ದಿನೇಶ್‌ರವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!