37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.

ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ಈ ಬಗ್ಗೆ ಸ್ವತಃ ದಿನೇಶ್‌ರವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya
error: Content is protected !!