24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಕಳೆಂಜ ಹಾಗೂ ಕೊಕ್ಕಡದ ಗ್ರಾಮಸ್ಥರು ಸ್ವಾಗತಿಸಿ, ಮೆರವಣಿಗೆಯ ಮೂಲಕ ಕಳೆಂಜಕ್ಕೆ ಬರಮಾಡಿಕೊಳ್ಳಲಾಯಿತು.

ಇವರು ಶೀಘ್ರದಲ್ಲೇ ಕಾರ್ಗಿಲ್‌ನಲ್ಲಿ ಕರ್ತವ್ಯ ನಿರ್ವಹಿಸಲು ತೆರಳಲಿದ್ದಾರೆ. ಎಸ್.ಎಸ್.ಎಲ್.ಸಿಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ, ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.೧೯ ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದರು. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿ ಪುತ್ರ.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!