24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!