May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

ಮಡಂತ್ಯಾರು:ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆಯು ಜೂ.3 ರಂದು ಮಡಂತ್ಯಾರು ಶಾಖೆಯಲ್ಲಿ ನಡೆಯಿತು.

1ವರ್ಷದ ನಿರಖು ಠೇವಣಿಗೆ 10 % ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- ₹ 100/- ಕ್ಕೆ ಬಡ್ಡಿದರ 85 ಪೈಸೆ ಮಾತ್ರ, ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರ ಉದ್ದೇಶದ ಕರಪತ್ರದ ಬಿಡುಗಡೆ ಸಮಾರಂಭವು ನಡೆಯಿತು. ಶ್ರೀ ಉದ್ಭವ ರೌದ್ರನಾಥೇಶ್ವರ ಕ್ಷೇತ್ರ ನಡುಬೊಟ್ಟುವಿನ ಆಡಳಿತ ಮೊಕ್ತೆರಸರರಾದ ವಿಶ್ವನಾಥ ಎನ್ ಕರಪತ್ರವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಹಕರಾದ ಸೇಕ್ರೆಡ್ ಹಾರ್ಟ್ ಮೆಡಿಕಲ್ಸ್ ಮಾಲಿಕರಾದ ಜಾರ್ಜ್ ಅಂಡ್ರದೆ,ಶ್ರೀ ಹರಿ ಕಂಪ್ಯೂಟರ್ ನ ಮಾಲಕರಾದ ಪಿ ಹರೀಶ್ ಭಟ್, ರಮೇಶ್ ಮಾಸ್ಟರ್, ವಿಶ್ವನಾಥ ಕೊಡೈಲು ಲೋಕೇಶ್ ಬೋವುದಪಾಡಿ ಉಪಸ್ಥಿತರಿದ್ದರು.

ಗ್ರಾಹಕರಾದ ವಿಲಿಯಂ ವಾಲ್ಟರ್ ಮಸ್ಕರಸ್ ಇವರಿಗೆ ಠೇವಣಿ ಪತ್ರ ಮಡಂತ್ಯಾರು ಶಾಖಾ ವ್ಯವಸ್ಥಾಪಕ ರಕ್ಷಿತ್ ಕೆ ವಿತರಿಸಿದರು.ಸಿಬ್ಬಂದಿ ಅಭಿಜಿತ್ ಸಹಕರಿಸಿದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya
error: Content is protected !!