May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಕಳೆದ 13 ವರ್ಷಗಳಿಂದ ದೀಪಕ್ ಜಿ.ಅವರ ನೇತೃತ್ವದ ರಾಜಕೇಸರಿ ಸಂಘಟನೆ ರಕ್ತದಾನ, ಮನೆ ನಿರ್ಮಾಣ ಸೇರಿದಂತೆ ಹಲವಾರು ವಿವಿಧ ರೀತಿಯ ಸೇವಾ ಯೋಜನೆಗಳನ್ನು ಮಾಡುತ್ತಾ ಸಮಾಜದ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚುತಿರುವುದರ ಒಟ್ಟಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ.ಅವರಿಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ದೈವ ದೇವರುಗಳು ಶಕ್ತಿಯನ್ನು ನೀಡಲಿ, ನಾನು ಮಾಡಿದ ಮನವಿಗೆ ಸ್ಪಂದಿಸಿ ಪಡ್ಲಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಮತ್ತು ಪುಸ್ತಕವನ್ನು ರಾಜಕೇಸರಿ ಸಂಘಟನೆಯ ಪೋಷಕರಾದ ಕಟ್ಟೆಮಾರ್ ಮನೋಜ್ ಅವರ ಹುಟ್ಟುಹಬ್ಬದ ದಿನ ಶಾಲೆಗೆ ತಂದು ನೀಡಿರುವುದು ಸಂತಸ ತಂದಿದೆ. ಅವರಿಗೆ ಶಾಲಾ ಮಕ್ಕಳ ಪರವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ. ಉತ್ತಮ ರೀತಿಯಲ್ಲಿ ಕಲಿತು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬಾಳಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹಶಿಕ್ಷಕ ಮಧು ವಂದಿಸಿದರು. ಶಾಲಾ ಮಕ್ಕಳು ಹುಟ್ಟುಹಬ್ಬ ಆಚರಿಸುತ್ತಿರುವ ಮನೋಜ್ ಕಟ್ಟೆಮಾರ್ ಅವರಿಗೆ ಶುಭಾಶಯ ಕೋರಿದರು.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!