28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಕಳೆದ 13 ವರ್ಷಗಳಿಂದ ದೀಪಕ್ ಜಿ.ಅವರ ನೇತೃತ್ವದ ರಾಜಕೇಸರಿ ಸಂಘಟನೆ ರಕ್ತದಾನ, ಮನೆ ನಿರ್ಮಾಣ ಸೇರಿದಂತೆ ಹಲವಾರು ವಿವಿಧ ರೀತಿಯ ಸೇವಾ ಯೋಜನೆಗಳನ್ನು ಮಾಡುತ್ತಾ ಸಮಾಜದ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚುತಿರುವುದರ ಒಟ್ಟಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ.ಅವರಿಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ದೈವ ದೇವರುಗಳು ಶಕ್ತಿಯನ್ನು ನೀಡಲಿ, ನಾನು ಮಾಡಿದ ಮನವಿಗೆ ಸ್ಪಂದಿಸಿ ಪಡ್ಲಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಮತ್ತು ಪುಸ್ತಕವನ್ನು ರಾಜಕೇಸರಿ ಸಂಘಟನೆಯ ಪೋಷಕರಾದ ಕಟ್ಟೆಮಾರ್ ಮನೋಜ್ ಅವರ ಹುಟ್ಟುಹಬ್ಬದ ದಿನ ಶಾಲೆಗೆ ತಂದು ನೀಡಿರುವುದು ಸಂತಸ ತಂದಿದೆ. ಅವರಿಗೆ ಶಾಲಾ ಮಕ್ಕಳ ಪರವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ. ಉತ್ತಮ ರೀತಿಯಲ್ಲಿ ಕಲಿತು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬಾಳಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹಶಿಕ್ಷಕ ಮಧು ವಂದಿಸಿದರು. ಶಾಲಾ ಮಕ್ಕಳು ಹುಟ್ಟುಹಬ್ಬ ಆಚರಿಸುತ್ತಿರುವ ಮನೋಜ್ ಕಟ್ಟೆಮಾರ್ ಅವರಿಗೆ ಶುಭಾಶಯ ಕೋರಿದರು.

Related posts

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya
error: Content is protected !!