May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ವಾಣಿಜ್ಯ ನಿವೇಶನ ಉಜಿರೆಯ ಶ್ರೀ ಕಾಲಭೈರವ ಆರ್ಕೆಡ್ ನಲ್ಲಿ ದಿನಸಿ ಮಳಿಗೆ ಸಮೃದ್ಧಿ ಟ್ರೇಡರ್ಸ್ ಇದರ ಶುಭಾರಂಭವು ಜೂ. 6 ರಂದು ನಡೆಯಿತು.

ದಿನಸಿ ಮಳಿಗೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ಪಡ್ವೆಟ್ನಾಯ ದೀಪ ಬೆಳಗಿಸಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಪ್ರಸಾದ ನೀಡಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಹಾಗೂ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕೆ. ಗಂಗಾಧರ ಗೌಡ ಉದ್ಘಾಟಿಸಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಗೂ ನಗುಮೊಗದ ಸೇವೆಯನ್ನು ನೀಡಿ ಹತ್ತಾರು ಸಂಸ್ಥೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ದಿಶಾ ಫುಡ್ ಕಾರ್ನರ್ ನ ಮಾಲಕರಾದ ಅರುಣ್ ಕುಮಾರ್, ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಉಜಿರೆ ಪ್ರಾ. ಕೃ. ಪ. ಸ.ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಎಸ್. ಪಿ. ಆಯಿಲ್ ಮಿಲ್ ನ ಮಾಲಕ ಶಿವಕಾಂತ್ ಗೌಡ, ಉಜಿರೆ ಗ್ರಾ. ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

ಸಂಸ್ಥೆಗೆ ನ್ಯಾಯವಾದಿ ಅನಂತ ಮೋಹನ ಮೂಡಣ್ಣಾಯ,ಒಕ್ಕಲಿಗ ಗೌಡರ ಜಿಲ್ಲಾ ಕೋಶಾಧಿಕಾರಿ ಸೂರಜ್ ವಳಂಬ್ರ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟಿಗಳಾದ ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ, ದಿನೇಶ್ ಗೌಡ ಕೊಯ್ಯೂರು,ಸುರೇಶ್ ಗೌಡ ಕೌಡಂಗೆ, ನಿರ್ದೇಶಕರು ವಾಣಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿ,ಪ್ರವೀಣ್ ಫೆರ್ನಾಂಡಿಸ್ ಮಾಲಕರು ಹಳ್ಳಿಮನೆ ಉಜಿರೆ ಮೊದಲಾದವರು ಭಾಗವಹಿಸಿದ್ದರು.

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕರಾದ ಶ್ರೀಮತಿ ಮನ್ವಿತಾ ಮತ್ತು ಹೇಮಂತ್ ಗೌಡ ದಂಪತಿ ಸ್ವಾಗತಿಸಿ ಗೌರವಿಸಿದರು.

ಕಾರ್ಯಕ್ರಮವನ್ನು ನಿತಿನ್ ಸುರುಳಿ ನಿರೂಪಿಸಿ,ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಾಧಿಕಾರಿ ದಿನೇಶ್ ಗೌಡ ಕೆ.ವಂದಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!