24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ವಾಣಿಜ್ಯ ನಿವೇಶನ ಉಜಿರೆಯ ಶ್ರೀ ಕಾಲಭೈರವ ಆರ್ಕೆಡ್ ನಲ್ಲಿ ದಿನಸಿ ಮಳಿಗೆ ಸಮೃದ್ಧಿ ಟ್ರೇಡರ್ಸ್ ಇದರ ಶುಭಾರಂಭವು ಜೂ. 6 ರಂದು ನಡೆಯಿತು.

ದಿನಸಿ ಮಳಿಗೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ಪಡ್ವೆಟ್ನಾಯ ದೀಪ ಬೆಳಗಿಸಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಪ್ರಸಾದ ನೀಡಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಹಾಗೂ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕೆ. ಗಂಗಾಧರ ಗೌಡ ಉದ್ಘಾಟಿಸಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಗೂ ನಗುಮೊಗದ ಸೇವೆಯನ್ನು ನೀಡಿ ಹತ್ತಾರು ಸಂಸ್ಥೆಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ದಿಶಾ ಫುಡ್ ಕಾರ್ನರ್ ನ ಮಾಲಕರಾದ ಅರುಣ್ ಕುಮಾರ್, ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಉಜಿರೆ ಪ್ರಾ. ಕೃ. ಪ. ಸ.ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಎಸ್. ಪಿ. ಆಯಿಲ್ ಮಿಲ್ ನ ಮಾಲಕ ಶಿವಕಾಂತ್ ಗೌಡ, ಉಜಿರೆ ಗ್ರಾ. ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

ಸಂಸ್ಥೆಗೆ ನ್ಯಾಯವಾದಿ ಅನಂತ ಮೋಹನ ಮೂಡಣ್ಣಾಯ,ಒಕ್ಕಲಿಗ ಗೌಡರ ಜಿಲ್ಲಾ ಕೋಶಾಧಿಕಾರಿ ಸೂರಜ್ ವಳಂಬ್ರ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟಿಗಳಾದ ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ, ದಿನೇಶ್ ಗೌಡ ಕೊಯ್ಯೂರು,ಸುರೇಶ್ ಗೌಡ ಕೌಡಂಗೆ, ನಿರ್ದೇಶಕರು ವಾಣಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿ,ಪ್ರವೀಣ್ ಫೆರ್ನಾಂಡಿಸ್ ಮಾಲಕರು ಹಳ್ಳಿಮನೆ ಉಜಿರೆ ಮೊದಲಾದವರು ಭಾಗವಹಿಸಿದ್ದರು.

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕರಾದ ಶ್ರೀಮತಿ ಮನ್ವಿತಾ ಮತ್ತು ಹೇಮಂತ್ ಗೌಡ ದಂಪತಿ ಸ್ವಾಗತಿಸಿ ಗೌರವಿಸಿದರು.

ಕಾರ್ಯಕ್ರಮವನ್ನು ನಿತಿನ್ ಸುರುಳಿ ನಿರೂಪಿಸಿ,ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಾಧಿಕಾರಿ ದಿನೇಶ್ ಗೌಡ ಕೆ.ವಂದಿಸಿದರು.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya
error: Content is protected !!