24.7 C
ಪುತ್ತೂರು, ಬೆಳ್ತಂಗಡಿ
August 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು.

ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಾಣಿಗಳಿಗೆ ಆಹಾರದ ಕೊರತೆಯಾದರೆ ಪ್ರಾಣಿಸಂಕುಲ ಅಳಿವಿನಂಚಿಗೆ ಸಾಗುತ್ತದೆ. ಭೂಮಿಗೆ ನಮ್ಮ ಅಗತ್ಯವಿಲ್ಲ ಆದರೆ ನಮಗೆ ಭೂಮಿಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಹಿತ ಪರಿಸರ, ಸುಂದರ ಪರಿಸರ ನಮ್ಮಿಂದಲೇ ನಿರ್ಮಾಣವಾಗಲಿ’ ಎಂದರು.

ಪರಿಸರ ಸೌಂದರ್ಯ ಉಳಿಸಲು ಹಾಗೂ ಜೀವಿಗಳ ಉಳಿಯುವಿಕೆಗೆ ಹಣ್ಣಿನ ಗಿಡಗಳನ್ನು ಬೆಳೆಯುವುದು ಮಹತ್ವದ ಕಾರ್ಯ ಎಂದು ಅವರು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಕಸಿಕಟ್ಟುವ ವಿಧಾನವನ್ನು ತಿಳಿಸಿಕೊಟ್ಟರು.

ವಿಶ್ವ ಪರಿಸರ ದಿನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ, ಪರಿಸರ ಹಾಡು, ನಾಟಕ, ನೃತ್ಯ, ಪ್ಲಾಸ್ಟಿಕ್ ಬದಲಿ ವಸ್ತುಗಳ ತಯಾರಿ-ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೌಫೀರ ಅತಿಥಿ ಪರಿಚಯ ನೀಡಿದರು. ಸೃಜನಾ ಸ್ವಾಗತಿಸಿ, ಮನಸ್ವಿ ವಂದಿಸಿದರು. ಜ್ಞಾನ್ ಅನ್ವೇಷ್, ಸಚಿತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!