May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು.

ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಾಣಿಗಳಿಗೆ ಆಹಾರದ ಕೊರತೆಯಾದರೆ ಪ್ರಾಣಿಸಂಕುಲ ಅಳಿವಿನಂಚಿಗೆ ಸಾಗುತ್ತದೆ. ಭೂಮಿಗೆ ನಮ್ಮ ಅಗತ್ಯವಿಲ್ಲ ಆದರೆ ನಮಗೆ ಭೂಮಿಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ಲಾಸ್ಟಿಕ್ ರಹಿತ ಪರಿಸರ, ಸುಂದರ ಪರಿಸರ ನಮ್ಮಿಂದಲೇ ನಿರ್ಮಾಣವಾಗಲಿ’ ಎಂದರು.

ಪರಿಸರ ಸೌಂದರ್ಯ ಉಳಿಸಲು ಹಾಗೂ ಜೀವಿಗಳ ಉಳಿಯುವಿಕೆಗೆ ಹಣ್ಣಿನ ಗಿಡಗಳನ್ನು ಬೆಳೆಯುವುದು ಮಹತ್ವದ ಕಾರ್ಯ ಎಂದು ಅವರು ತಿಳಿಸಿದರಲ್ಲದೆ, ವಿದ್ಯಾರ್ಥಿಗಳಿಗೆ ಕಸಿಕಟ್ಟುವ ವಿಧಾನವನ್ನು ತಿಳಿಸಿಕೊಟ್ಟರು.

ವಿಶ್ವ ಪರಿಸರ ದಿನದ ಪ್ರಯುಕ್ತ ಪ್ರತಿಜ್ಞಾ ಸ್ವೀಕಾರ, ಪರಿಸರ ಹಾಡು, ನಾಟಕ, ನೃತ್ಯ, ಪ್ಲಾಸ್ಟಿಕ್ ಬದಲಿ ವಸ್ತುಗಳ ತಯಾರಿ-ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತೌಫೀರ ಅತಿಥಿ ಪರಿಚಯ ನೀಡಿದರು. ಸೃಜನಾ ಸ್ವಾಗತಿಸಿ, ಮನಸ್ವಿ ವಂದಿಸಿದರು. ಜ್ಞಾನ್ ಅನ್ವೇಷ್, ಸಚಿತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
error: Content is protected !!