25.1 C
ಪುತ್ತೂರು, ಬೆಳ್ತಂಗಡಿ
August 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!