May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.

ಈ ಕಾರ್ಯಕ್ರಮದಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯಶಿಕ್ಷಕಿ ವಿಜಯಾ ಕೆ, ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
error: Content is protected !!