May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: “ಮಕ್ಕಳನ್ನು ಅವಕಾಶಗಳಿಂದ ವಂಚಿತಗೊಳಿಸಬೇಡಿ” ಎಂದು ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ದಂತ ವೈದ್ಯೆ ಡಾ| ಮೀರಾ ಅನುಪಮಾ ಹೇಳಿದರು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ಸಿ.ಡಿ.ಪಿ.ಒ ಪ್ರಿಯಾ ಆಗ್ನೆಸ್ ಚಕ್ಕೋ “ಮಕ್ಕಳು ದೇವರಿಂದ ದೊರೆತ ಉಡುಗೊರೆ. ಮಕ್ಕಳನ್ನು ಇತರರೊಂದಿಗೆ ಹೋಲಿಸಬಾರದು” ಎಂದರು.

ಅವರು ಉಜಿರೆ ಎಸ್‌ಡಿಎಂ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ.6ರಂದು ನಡೆದ ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಮಮತಾ ಶೆಟ್ಟಿ ಹಾಗೂ ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya
error: Content is protected !!