24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು.

ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಕೆ ನಂದ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾ.ಪಂ. ಸದಸ್ಯ ಹರೀಶ್ ಸುವರ್ಣ, ಶ್ರೀಮತಿ ಪವಿತ್ರ ಸುಕುಮಾರ್ ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ್ ಗೌಡ ಬೊಳ್ಮಾ, ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದು, ಎಲ್‌ಕೆಜಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ನೀಲಕಂಠ ಶೆಟ್ಟಿ ಮತ್ತು ಶೀನ, ಗೌರವ ಸಲಹೆಗಾರರಾದ ಸಿ.ಜಿ. ಪ್ರಭಾಕರ್ ಮತ್ತು ಅರುಣ್ ಕುಮಾರ್, ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹಶಿಕ್ಷಕಿಯರಾದ ಶ್ರೀಮತಿ ರಾಜಿ ಸಿ.ಕೆ ವಂದಿಸಿ, ಶ್ರೀಮತಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya
error: Content is protected !!