24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!