25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ಕಬ್ ಮಾಸ್ಟರ್ ಅಮೃತ ವಿ ಶೆಟ್ಟಿ ಮಾಹಿತಿಯನ್ನು ನೀಡಿದರು.

ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು. ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ.ವಿ. ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya
error: Content is protected !!