24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೫ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್‌ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು.

ಸಹಶಿಕ್ಷಕಿ ಸ್ಕೌಟ್ ಮಾಸ್ಟರ್ ಶ್ರೀಮತಿ ಆಶಾ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಶ್ರೀಮತಿ ಅಮೃತ ವಿ ಶೆಟ್ಟಿ , ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ, ಶ್ರೀಮತಿ ಶೀಭಾ, ಶ್ರೀಮತಿ ದೀಕ್ಷಾ, ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಶ್ರೀಮತಿ ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!