ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಕ್ಷೇಮವನ್ನು ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಬೆಳ್ತಂಗಡಿ ವನ್ಯ ಜೀವಿ ವಲಯದ ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿಗರು ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

ಕೆಲ ದಿನಗಳ ಹಿಂದೆ ವೀಪರಿತ ಮಳೆಯಾಗುತ್ತಿದ್ದ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿದ್ದು ಇದೀಗ ಮಳೆ ತಗ್ಗಿದ್ದು ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಬಂಡಾಜೆ ಜಲಪಾತ ವೀಕ್ಷಣೆಗೆ ನಿರ್ಬಂಧ ಮುಂದುವರೆದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗ ಪ್ರಕಟಣೆ ತಿಳಿಸಿದೆ.













