May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಬೆಳ್ತಂಗಡಿ: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ವತಿಯಿಂದ, ಕೃಷಿ ಇಲಾಖೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಜೂ.4ರಂದು ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜರುಗಿತು.

ಪುತ್ತೂರು ಐ.ಸಿ.ಏ.ಆರ್ ಗೇರು ಸಂಶೋಧನಾ ಕೇಂದ್ರ ಮುಖ್ಯಸ್ಥ ದಿನಕರ ಅಡಿಗ ಗೇರು ಸಂಶೋಧನಾ ಕೇಂದ್ರದಲ್ಲಿ ರೈತರಿಗೆ ಲಭ್ಯವಿರುವ ಇತ್ತೀಚಿನ ಕೊಯ್ಲು ಹಾಗೂ ಕೊಯ್ಲಿನೋತ್ತರ ತಂತ್ರಜ್ಞಾನಗಳ ಕುರಿತು ವಿವರಿಸಿದರು.

ವಿಜ್ಞಾನಿ ಡಾ. ಭಾಗ್ಯ ರೈತರಿಗೆ ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಗ ವಿಜ್ಞಾನಿ ಡಾ. ರಶ್ಮಿ ಅಡಿಕೆ, ತೆಂಗು ಸಹಿತ ಪ್ರಮುಖ ತೋಟಗಾರಿಕೆ ಬೆಳೆಗಳ ಮುಂಗಾರು ಹಂಗಾಮಿನ ಸಮಗ್ರ ನಿರ್ವಹಣೆಯ ಉಪನ್ಯಾಸ ನೀಡಿದರು.

ವಿಜ್ಞಾನಿ ಡಾ. ಹರೀಶ್ ಶೆಣೈ ಭತ್ತದ ತಳಿಗಳ ಬಗ್ಗೆ ವಿವರಿಸಿ ಬೀಜೋಪಚಾರದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ, ಸುರಕ್ಷಿತ ಪೀಡನಾಶಕಗಳ ಬಳಕೆ ಕುರಿತು ತಿಳಿಸಿದರು.

ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಏ.ಡಿ. ಕೃಷಿ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ತೋಟಗಾರಿಕೆ ಇಲಾಖೆ ಯೋಜನೆಗಳ ಬಗ್ಗೆ ಹಾಗೂ ಎಲೆ ಚುಕ್ಕಿ ರೋಗದ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಅಧಿಕಾರಿ ಗಣೇಶ್, ಆತ್ಮ ಸಿಬ್ಬಂದಿಗಳಾದ ನವನೀತ, ಸಾಯಿನಾಥ, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಕೃಷಿ ಸಖಿಯರು ಮತ್ತು ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.

Related posts

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya
error: Content is protected !!