22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.

ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ಈ ಬಗ್ಗೆ ಸ್ವತಃ ದಿನೇಶ್‌ರವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya
error: Content is protected !!