September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ಅಡಗಿ ನಿಂತರು.

ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೋರ್ಛೆ ಹೋಗಿದ್ದರು. ರಿಕ್ಷಾವನ್ನು ಪುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ ಬಗ್ಗೆ ವರದಿಯಾಗಿದೆ. ಕಲ್ಲೇರಿ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ಈ ಬಗ್ಗೆ ಸ್ವತಃ ದಿನೇಶ್‌ರವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya
error: Content is protected !!