26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ.ಜಿ.ಪಂ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು.

ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಕಳೆದ 13 ವರ್ಷಗಳಿಂದ ದೀಪಕ್ ಜಿ.ಅವರ ನೇತೃತ್ವದ ರಾಜಕೇಸರಿ ಸಂಘಟನೆ ರಕ್ತದಾನ, ಮನೆ ನಿರ್ಮಾಣ ಸೇರಿದಂತೆ ಹಲವಾರು ವಿವಿಧ ರೀತಿಯ ಸೇವಾ ಯೋಜನೆಗಳನ್ನು ಮಾಡುತ್ತಾ ಸಮಾಜದ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚುತಿರುವುದರ ಒಟ್ಟಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ.ಅವರಿಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ದೈವ ದೇವರುಗಳು ಶಕ್ತಿಯನ್ನು ನೀಡಲಿ, ನಾನು ಮಾಡಿದ ಮನವಿಗೆ ಸ್ಪಂದಿಸಿ ಪಡ್ಲಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಮತ್ತು ಪುಸ್ತಕವನ್ನು ರಾಜಕೇಸರಿ ಸಂಘಟನೆಯ ಪೋಷಕರಾದ ಕಟ್ಟೆಮಾರ್ ಮನೋಜ್ ಅವರ ಹುಟ್ಟುಹಬ್ಬದ ದಿನ ಶಾಲೆಗೆ ತಂದು ನೀಡಿರುವುದು ಸಂತಸ ತಂದಿದೆ. ಅವರಿಗೆ ಶಾಲಾ ಮಕ್ಕಳ ಪರವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ. ಉತ್ತಮ ರೀತಿಯಲ್ಲಿ ಕಲಿತು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬಾಳಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹಶಿಕ್ಷಕ ಮಧು ವಂದಿಸಿದರು. ಶಾಲಾ ಮಕ್ಕಳು ಹುಟ್ಟುಹಬ್ಬ ಆಚರಿಸುತ್ತಿರುವ ಮನೋಜ್ ಕಟ್ಟೆಮಾರ್ ಅವರಿಗೆ ಶುಭಾಶಯ ಕೋರಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
error: Content is protected !!