23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya
error: Content is protected !!