30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya
error: Content is protected !!