July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya
error: Content is protected !!