24 C
ಪುತ್ತೂರು, ಬೆಳ್ತಂಗಡಿ
June 8, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ನಾರಾವಿ: ಕರ್ನಾಟಕ ಅರಣ್ಯ ಇಲಾಖೆ, ಗ್ರಾ.ಪಂ. ನಾರಾವಿ, ಕೃ.ಪ.ಸ. ಸಂಘ ನಾರಾವಿ, ಜನಸೇವಾ ಟ್ರಸ್ಟ್ ನಾರಾವಿ, ಸರ್ಕಾರಿ ಪ್ರೌಢ ಶಾಲೆ ನಾರಾವಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇದರ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ಹಣ್ಣಿನ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 300 ವಿದ್ಯಾರ್ಥಿಗಳಿಗೆ ವಿವಿಧ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಸುನಿಲ್ ಕೆ.ಎಸ್., ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ವಿಶ್ವ ಪರಿಸರ ದಿನದ ಮಹತ್ವ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಬೀಟ್ ಮಂಜುನಾಥ ಸಾವಳಿ, ಜಾನ್, ನಾರಾವಿ ಅರಣ್ಯ ರಕ್ಷಕರಾದ ಮಂಜುನಾಥ್, ನಾರಾವಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಸುಮಿತ್ರಾ, ಗ್ರಾ.ಪಂ. ಸದಸ್ಯರಾದ ವಸಂತ ಪಡ್ಡಾಯಿಕಾಪು, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ನಿರ್ದೇಶಕ ಉದಯ್ ಹೆಗ್ಡೆ, ನಾರಾವಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್, ಕಾರ್ಯದರ್ಶಿ ಸದಾನಂದ ಬಂಗೇರ, ಸರ್ಕಾರಿ ಪ್ರೌಢ ಶಾಲಾ ಮುಖ್ಯ್ಯೊಪಾಧ್ಯಾಯಿನಿ ಸುಶೀಲ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ್ಯೋಪಾಧ್ಯಾಯ ಪ್ರಭಾಕರ್ ಮತ್ತು ಶಿಕ್ಷಕ ವೃಂದದವರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!