24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya
error: Content is protected !!