July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya
error: Content is protected !!