23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ.

ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ ಅವರು ಶಿಶಿಲ ಹಾಗೂ ಅರಸಿನಮಕ್ಕಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1984ರ ಫೆಬ್ರವರಿ 4ರಂದು ಸೇರಿದರು. ಆರಂಭದಲ್ಲಿ ಸೇವಾನಿರತರಾಗಿ 16 ವರ್ಷ ಸೇವೆ ಸಲ್ಲಿಸಿ, ನಂತರ ಸೂಪರ್ ವೈಸರ್ ಆಗಿ 2.6 ವರ್ಷ, ಪ್ರೊಜೆಕ್ಟ್ ಆಫೀಸರ್ ಆಗಿ 4 ವರ್ಷ ಸೇವೆ ಸಲ್ಲಿಸಿದ ನಂತರ ನಿರ್ದೇಶಕರಾಗಿ ಭಡ್ತಿ ಹೊಂದಿ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದರು.

ಸಿಡಿಪಿ ಡಿವಿಷನ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಸಂಪೂರ್ಣ ಸುರಕ್ಷದಲ್ಲಿ 2020ರಿಂದ 2022ರವರೆಗೆ ಸೇವೆ ಸಲ್ಲಿಸಿದರು. ಇದಾದ ನಂತರ ಪ್ರಾದೇಶಿಕ ನಿರ್ದೇಶಕರಾಗಿ ಮೈಸೂರು ವಲಯದಲ್ಲಿ ಸೇವೆ ಸಲ್ಲಿಸಿದ ಜಯರಾಮ ನೆಲ್ಲಿತ್ತಾಯರು ಕಳೆದ ಮಾರ್ಚ್ ನಲ್ಲಿ ನಿವೃತ್ತಿಯಾಗಿದ್ದಾರೆ. ಇವರು 41 ವರ್ಷಗಳ ಸುಧೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!