July 23, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya
error: Content is protected !!