September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ . ಬೆಳ್ತಂಗಡಿ ಈ ಸಂಘದ 2023-24 ರ ಸಾಲಿನ ಲೆಕ್ಕಪರಿಶೋಧನೆಯಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಹಗರಣದ ಬಗ್ಗೆ ಸಹಕಾರಿ ಸಂಘದ ಉಪ ನಿಬಂಧಕರು 2023-24 ರಲ್ಲಿ ಜವಬ್ದಾರಿಯಲ್ಲಿದ್ದ 15 ಮಂದಿ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸಿದ್ದು, ಸೊಸೈಟಿಯ ಜವಾಬ್ದಾರಿ ವಹಿಸಿದ್ದ 9 ಮಂದಿಯ ಆಸ್ತಿಯನ್ನು ತೀರ್ಪು ಪೂರ್ವ ಜಪ್ತಿ ಮಾಡಿ ಜೂ‌.5 ರಂದು ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯ ಆದೇಶ ಮಾಡಿ ನೋಟಿಸ್ ಜಾರಿ ಮಾಡಲಾಗಿದೆ.

ಜಪ್ತಿ ಪೂರ್ವ ಆಸ್ತಿ ಮುಟ್ಟುಗೋಳಿಗೆ ನೋಟಿಸ್ ಜಾರಿಯಾದವರ ವಿವರ:
ಅಧ್ಯಕ್ಷ ಸಿ.ಹೆಚ್.ಪ್ರಭಾಕರ, ನಿರ್ದೇಶಕರಾದ ವಿಶ್ವನಾಥ.ಆರ್.ನಾಯಕ್, ವಿಶ್ವನಾಥ, ಪ್ರಮೋದ್.ಆರ್.ನಾಯಕ್, ಪಿ.ಜಗನ್ನಾಥ್, ರತ್ನಾಕರ ಶೇರಿಗಾರ್, ನಯನ ಶಿವಪ್ರಸಾದ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಚಂದ್ರಕಾಂತ್,ಸಿಬ್ಬಂದಿ ಸರಿತಾ ಸೇರಿ ಒಂಭತ್ತು ಮಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನ್ಯಾಯಾಲಯದಿಂದ ಜೂ.5 ರಂದು ನೋಟಿಸ್ ಜಾರಿಯಾಗಿದೆ.

ನಗದು ಠೇವಣಿ ಇಡಲು ಅವಕಾಶ: ಒಂದು ವೇಳೆ ಜಪ್ತಿ ಪೂರ್ವ ಜಪ್ತಿ ಆದೇಶವನ್ನು ತೆರವುಗೊಳಿಸಲು ಬಯಸಿದಲ್ಲಿ ಜೂ‌.20 ರ ಒಳಗೆ ರೂ.30,45,24,278( ಮೂವತ್ತು ಕೋಟಿ ನಲವತ್ತೈದು ಲಕ್ಷದ ಇಪ್ಪತೈದು ಸಾವಿರದ ಇನ್ನೂರ ಇಪ್ಪತ್ತೆಂಟು) ನಗದು ಭದ್ರತೆಯಾಗಿ ಈ ನ್ಯಾಯಾಲಯದ ಪಿ.ಡಿ ಖಾತೆಯಲ್ಲಿ ನಿಗದಿತ ಅವಧಿಯೊಳಗೆ ಠೇವಣಿ ಇರಿಸತಕ್ಕದ್ದು ಇಲ್ಲವಾದರೆ ಆಸ್ತಿ ಮುಟ್ಟುಗೋಳು ಹಾಕಲಾಗುವುದಾಗಿ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಪ್ರಮುಖ ಆದೇಶ:, ಸಹಕಾರ ಸಂಘಗಳ ಉಪನಿಬಂಧಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ನೀಡಿರುವ ಆದೇಶದಲ್ಲಿ ಚರಾಸ್ತಿಯನ್ನು ಷರತ್ತಿಗೆ ಒಳಪಟ್ಟು ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ ಹೊರಡಿಸಿರುತ್ತೇನೆ. ಒಂದು ವೇಳೆ ಈ ಆದೇಶವನ್ನು ಅತಿಕ್ರಮಿಸಿ ಯಾರದರೂ ಜಪ್ತಿಗೊಳಪಟ್ಟ ಈ ಕೆಳಕಂಡ ಚರಾಸ್ತಿಯನ್ನು ಖರೀದಿಸಿದ್ದಲ್ಲಿ ಅಂತಹ ಹೊಣೆಗಾರಿಕೆಗೆ ಖರೀದಿಸಿದವರೇ ಸಂಪೂರ್ಣ ಹೊಣೆಗಾರರು ಆಗಿರುತ್ತಾರೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.

Related posts

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya
error: Content is protected !!