July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.೬ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು.

ಮುಖ್ಯ ಅತಿಥಿ ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಲ್ಯಾರಿ ಫ್ರಾಂಕ್ಲಿನ್ ಪಿಂಟೋ ಮಾತನಾಡಿ ನಾವು ಬೇರೆಯವರಿಗೆ ದಾನ ಮಾಡಿದರೆ ನಮಗೆ ದೇವರು ಅದಕ್ಕಿಂತ ಜಾಸ್ತಿ ಕೊಡುತ್ತಾನೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.

ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೋ ಡೇಸ ಮಾತನಾಡಿ ನಾವು ತ್ಯಾಗ ಮಾಡುವುದರ ಜೊತೆಗೆ ಬೇರೆಯವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.
ವಿದ್ಯಾರ್ಥಿಗಳಾದ ಕು. ರಿವಾನಿಯ ಶಾನ್ವಿ ನಿರೂಪಿಸಿ, ಮಿನ್ಶ ಹನೀಫ್ ಸ್ವಾಗತಿಸಿ, ಮಹಮ್ಮದ್ ಫಾಹಿಝ್ ವಂದಿಸಿದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya
error: Content is protected !!