September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಅದ್‌ಹಾ (ಬಕ್ರೀದ್) ಹಬ್ಬ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗ್ಗೆ ಮಸ್ಜಿದ್ ನಲ್ಲಿ ಧರ್ಮ ಗುರುಗಳಾದ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ಈದ್ ಸಂದೇಶ ನೀಡಿದರು‌. ಬಳಿಕ ಸಾಮೂಹಿಕ ಈದ್ ನಮಾಝ್ ನಡೆಯಿತು.

“ಖುತುಬಾ” ಪಾರಾಯಣ ಬಳಿಕ, ಜಮಾಅತ್ ನಲ್ಲಿ ಮೃತರಾದವರ ಸ್ಮರಣೆಗಾಗಿ ಸಾಮೂಹಿಕವಾಗಿ “ಯಾಸೀನ್” ಪಾರಾಯಣ ನಡೆದು ದುಆ ಪ್ರಾರ್ಥನೆ ಸಲ್ಲಿಸಲಾಯಿತು. ಮಸ್ಲಕ್ ಮದರಸದ ಮುಖ್ಯೋಪಾಧ್ಯಾಯ ತ್ವಾಹಿರ್ ಸ‌ಅದಿ ತಕ್ಬೀರ್ ಗೇ ನೇತೃತ್ವ ನೀಡಿದರು.

ಮಸ್ಜಿದ್ ನಿರ್ಮಿಸಲ್ಪಟ್ಟಿರುವ ಜಮಲುಲ್ಲೈಲಿ ತಂಙಳ್ ಕುಟುಂಬದ ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಸಯ್ಯಿದ್ ಸಿಮಾಕ್ ಜಮಲುಲ್ಲೈಲಿ ತಂಙಳ್, ‌ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಶೀರ್ ನೆಕ್ಕರೆ, ಕಾರ್ಯಾಧ್ಯಕ್ಷ ಕೆರೀಂ ಕೆ.ಎಸ್, ಪ್ರ. ಕಾರ್ಯದರ್ಶಿ ಅಬ್ಬಾಸ್ ಸಿ, ಕೋಶಾಧಿಕಾರಿ ಕೆರೀಂ ಕುರುಡ್ಯ ಹಾಗೂ ಪದಾಧಿಕಾರಿಗಳು, ‌ಜಮಾಅತ್ ಬಾಂಧವರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಖುಷಿ ಹಂಚಿಕೊಂಡರು. ಪಾನೀಯ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

Related posts

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!