ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕಾರ್ಯಕ್ರಮ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಡವರ ಸಬಲೀಕರಣ ಕಾರ್ಯದ ಜೊತೆಗೆ ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಯನ್ನು ನೀಡಿದ ದುಗ್ಗಪ್ಪ ನವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.

ಅವರು ಕೊಯ್ಯೂರು ಗ್ರಾಮದ ದಿ. ತಿಮ್ಮಯ ಗೌಡ ಹಾಗೂ ದಿ.ಶ್ರೀಮತಿ ನೀಲಮ್ಮ ಅವರ ಪುತ್ರರಾಗಿದ್ದು ಕಡಿರುದ್ಯಾವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೇವಾನಿರತನಾಗಿ ಕರ್ತವ್ಯಕ್ಕೆ ಸೇರ್ಪಡೆಯಾಗಿ, ನಂತರ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಭಡ್ತಿ ಹೊಂದಿ ಲಾಯಿಲ, ಉಜಿರೆ, ಕನ್ಯಾಡಿ ಮತ್ತು ಕಾರ್ಕಳದಲ್ಲಿ ಮೇಲ್ವಿಚಾರಕನಾಗಿ ಕರ್ತವ್ಯ ನಿರ್ವಹಿಸಿ, ಮೇಲ್ವಿಚಾರಕರ ಹುದ್ದೆಗೆ ಬಡ್ತಿಗೊಂಡು, ಪುತ್ತೂರು ತಾಲೂಕಿಗೆ ಯೋಜನಾಧಿಕಾರಿಯಾಗಿ ಸೇರ್ಪಡೆಗೊಂಡು 3 ವರ್ಷ ಸೇವೆ ಸಲ್ಲಿಸಿದರು. ನಿರ್ದೇಶಕರಾಗಿ ಶಿವಮೊಗ್ಗ, ಉಡುಪಿ, ಕಲಬುರಗಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. 2023ರಿಂದ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಜೂ.1ರಂದು ಸೇವಾ ನಿವೃತ್ತಿಯನ್ನು ಹೊಂದಿರುತ್ತಾರೆ.

Related posts

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

Suddi Udaya
error: Content is protected !!